ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ!

ಸೆಪ್ಟೆಂಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಬಲಿಷ್ಠ ತಂಡ ಕಟ್ಟಲು ಮುಂದಾಗಿದ್ದು ಜನವರಿ 18 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಏಕದಿನ ಹಾಗೂ ಟಿ-ಟ್ವೆಂಟಿ ಸರಣಿಗೆ ತಂಡವನ್ನು ಪ್ರಕಟಿಸಿದೆ.

ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ-ಟ್ವೆಂಟಿ ಸರಣಿಯನ್ನು ತನ್ನದಾಗಿಸಿಕೊಂಡಿದ್ದ ಭಾರತ ಮತ್ತೆ ಅದೇ ತಂಡವನ್ನು ಪ್ರಕಟಿಸಿದ್ದು ಇತ್ತೀಚೆಗೆ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ತ್ರಿಶತಕ ಸಿಡಿಸಿದ್ದ ಮುಂಬೈ ಬ್ಯಾಟ್ಸ್‌ಮನ್ ಪೃಥ್ವಿ ಶಾ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿದ್ದಾರೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಸ್. ಭರತ್ ಹೊಸದಾಗಿ ಆಯ್ಕೆಯಾಗಿದ್ದು ತಂಡವನ್ನು ಸೇರಿಕೊಳ್ಳಲಿದ್ದಾರೆ. ಹಿರಿಯ ಆಟಗಾರರಾದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಗೆ ಲಭ್ಯರಾಗಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ನ್ಯೂಜಿಲೆಂಡ್ ವಿರುದ್ಧ ಜನವರಿ 18 ರಿಂದ ಪಂದ್ಯಗಳು ಆರಂಭವಾಗಲಿದ್ದು ಮೊದಲ ಏಕದಿನ ಪಂದ್ಯ ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ಫೆಬ್ರುವರಿ 24 ಕ್ಕೆ ಕೊನೆಗೊಳ್ಳಲಿದೆ.

ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾಡ೯ರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಉಪ ನಾಯಕನಾಗಿ ಕನ್ನಡಿಗ ಕೆ. ಎಲ್. ರಾಹುಲ್ ವಾಪಸ್ ಆಗಿದ್ದು ಮೊದಲ ಎರಡು ಪಂದ್ಯಗಳಿಗೆ ಬಲಿಷ್ಠ ತಂಡ ಕಟ್ಟಲಾಗಿದೆ, ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಫಿಟ್ನೆಸ್ ಟೆಸ್ಟ್ ಪಾಸ್ ಆದರೆ ತಂಡವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಏಕದಿನ ತಂಡದ ವಿವರ :- ರೋಹಿತ್ ಶರ್ಮಾ ( ನಾಯಕ ) , ಶುಬ್ಮನ್ ಗಿಲ್ , ಇಶಾನ್ ಕಿಶನ್ , ವಿರಾಟ್ ಕೊಹ್ಲಿ , ಸುರ್ಯ ಕುಮಾರ್ , ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್ ) , ಹಾರ್ದಿಕ್ ಪಾಂಡ್ಯ ( ಉಪ ನಾಯಕ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಯುಜ್ವೇಂದ್ರ ಚಹಾಲ್ , ಕುಲದೀಪ್ ಯಾದವ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್.

ಟಿ-ಟ್ವೆಂಟಿ ತಂಡದ ವಿವರ: ಹಾರ್ದಿಕ್ ಪಾಂಡ್ಯ (ನಾಯಕ ) , ಸೂರ್ಯಕುಮಾರ್ ಯಾದವ್ ( ಉಪನಾಯಕ ) , ಇಶಾನ್ ಕಿಶನ್ ( ವಿಕೆಟ್ ಕೀಪರ್ ) , ದೀಪಕ್ ಹೂಡ , ರಾಹುಲ್ ತ್ರಿಪಾಠಿ , ರುತುರಾಜ್ ಗಾಯಕ್ವಾಡ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್ , ಕುಲದೀಪ್ ಯಾದವ್ , ಚಾಹಲ್ , ಅರ್ಶ್ದೀಪ್ ಸಿಂಗ್ , ಉಮ್ರಾನ್ ಮಲಿಕ್ , ಶಿವಂ ಮಾವಿ , ಪೃಥ್ವಿ ಶಾ , ಮುಕೇಶ್ ಕುಮಾರ್.

ಟೆಸ್ಟ್‌ ತಂಡದ ವಿವರ: ರೋಹಿತ್ ಶರ್ಮಾ (ನಾಯಕ ), ಕೆಎಲ್ ರಾಹುಲ್ (ಉಪ ನಾಯಕ ) , ಶುಭಮನ್ ಗಿಲ್, ಚತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ , ಕೆಎಸ್ ಭರತ್ (ವಿಕೆಟ್ ಕೀಪರ್ ) , ಇಶಾನ್ ಕಿಶನ್ (ವಿಕೆಟ್ ಕೀಪರ್ ) , ಆರ್ ಅಶ್ವಿನ್, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.

Ramesh Babu

Journalist

View Comments

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

7 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

13 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

17 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

20 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago