ನ್ಯೂ ಇಯರ್ ಸೆಲಬ್ರೇಷನ್: 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭಗೊಳ್ಳಲಿದೆ. ನ್ಯೂ‌ ಇಯರ್ ಸಂಭ್ರಮಾಚರಣೆಗಳಲ್ಲಿ ಪಟಾಕಿ ನಿಷೇಧ ಮಾಡಿ ಪೊಲೀಸ್​ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯುವ ಜಾಗಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ.

ಸುಮಾರು 19 ಅಂಶಗಳ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮಗಳನ್ನ ಪಾಲಿಸಬೇಕು.

2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು

3. ಕಡ್ಡಾಯವಾಗಿ ಧ್ವನಿವರ್ದಕ ಪರವಾನಿಗೆ ಪಡೆದುಕೊಂಡ ನಂತರ ನಿಗಧಿತ ಶಬ್ಧ ಮಿತಿ ಇರಬೇಕು.
ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

4. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.

5. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು

6. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.

7. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.

8. ಮಾದಕ ವಸ್ತುಗಳ ಬಳಕೆ‌ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು.

9. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್‌ ವಿರುದ್ಧ ಕೇಸ್.

10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.

11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.

12. ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.

13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.

14. ಪಾರ್ಟಿ ವೇಳೆ ಇರುವ ಕೆಲಸ ಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.

15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.

16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.

17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.

18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು..
ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಬೆಂಗಳೂರು ಪೊಲೀಸರು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

11 minutes ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

12 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

12 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

13 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

13 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

20 hours ago