ನ್ಯೂ ಇಯರ್ ಸೆಲಬ್ರೇಷನ್: 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭಗೊಳ್ಳಲಿದೆ. ನ್ಯೂ‌ ಇಯರ್ ಸಂಭ್ರಮಾಚರಣೆಗಳಲ್ಲಿ ಪಟಾಕಿ ನಿಷೇಧ ಮಾಡಿ ಪೊಲೀಸ್​ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯುವ ಜಾಗಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ.

ಸುಮಾರು 19 ಅಂಶಗಳ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮಗಳನ್ನ ಪಾಲಿಸಬೇಕು.

2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು

3. ಕಡ್ಡಾಯವಾಗಿ ಧ್ವನಿವರ್ದಕ ಪರವಾನಿಗೆ ಪಡೆದುಕೊಂಡ ನಂತರ ನಿಗಧಿತ ಶಬ್ಧ ಮಿತಿ ಇರಬೇಕು.
ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

4. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.

5. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು

6. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.

7. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.

8. ಮಾದಕ ವಸ್ತುಗಳ ಬಳಕೆ‌ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು.

9. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್‌ ವಿರುದ್ಧ ಕೇಸ್.

10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.

11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.

12. ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.

13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.

14. ಪಾರ್ಟಿ ವೇಳೆ ಇರುವ ಕೆಲಸ ಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.

15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.

16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.

17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.

18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು..
ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಬೆಂಗಳೂರು ಪೊಲೀಸರು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

30 minutes ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

18 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago