Categories: ರಾಜ್ಯ

ನ.14ರಂದು ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 14ರ ಮಂಗಳವಾರ ಸಂಜೆ 5.30 ರಿಂದ 6.30ರ ಗೋಧೂಳಿ ಲಗ್ನದಲ್ಲಿ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಗೋ ಪೂಜೆ ನಡೆಸಬೇಕು ಎಂದು ಆದೇಶ ಪ್ರಕಟಿಸಲಾಗಿದೆ.

ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಬೇಕು ಎಂದು ಸೂಚಿಸಲಾಗಿದೆ.

 ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ.

ಗೋ ಪೂಜೆ ಕುರಿತು ಭಕ್ತಾದಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ದೇವಾಲಯದ ನೋಟಿಸ್ ಬೋರ್ಡ್‌ನಲ್ಲಿ ಮಾಹಿತಿ ನೀಡಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗೋ ಪೂಜೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಬೇಕು ಎಂದು ದೇವಾಲಯದ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.

ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ. ಗೋ ಪೂಜೆ ಮಾಡಲು ನಿಯಮಗಳು ಸಹ ಇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋ ಪೂಜೆ ಮಾಡಲು ಆದೇಶ ಹೊರಡಿಸಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago