Categories: ರಾಜ್ಯ

ನ.14ರಂದು ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 14ರ ಮಂಗಳವಾರ ಸಂಜೆ 5.30 ರಿಂದ 6.30ರ ಗೋಧೂಳಿ ಲಗ್ನದಲ್ಲಿ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಗೋ ಪೂಜೆ ನಡೆಸಬೇಕು ಎಂದು ಆದೇಶ ಪ್ರಕಟಿಸಲಾಗಿದೆ.

ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಬೇಕು ಎಂದು ಸೂಚಿಸಲಾಗಿದೆ.

 ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ.

ಗೋ ಪೂಜೆ ಕುರಿತು ಭಕ್ತಾದಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ದೇವಾಲಯದ ನೋಟಿಸ್ ಬೋರ್ಡ್‌ನಲ್ಲಿ ಮಾಹಿತಿ ನೀಡಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗೋ ಪೂಜೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಬೇಕು ಎಂದು ದೇವಾಲಯದ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.

ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ. ಗೋ ಪೂಜೆ ಮಾಡಲು ನಿಯಮಗಳು ಸಹ ಇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋ ಪೂಜೆ ಮಾಡಲು ಆದೇಶ ಹೊರಡಿಸಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago