ನ.18ರಂದು ಮಧ್ಯಾಹ್ನ 3ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಬೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ ಹಾಗೂ ಸುರಕ್ಷತಾ ದಿನವನ್ನ ಆಯೋಜಿಸಲಾಗಿದೆ.
ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ, ನ್ಯೂನ್ಯತೆಗಳನ್ನ ಪರಿಹರಿಸಿಕೊಳ್ಳುವ ಸಲುವಾಗಿ ಗ್ರಾಹಕರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಗ್ರಾಹಕರು ಪಾಲ್ಗೊಳ್ಳಬೇಕು ಎಂದು ದೊಡ್ಡಬಳ್ಳಾಪುರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡುವ ಮೂಲಕ ಪ್ರಕಟಣೆ ಹೊರಡಿಸಿದ್ದಾರೆ.