ನ.2ಕ್ಕೆ ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭ: ಮೊದಲ ದಿನ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ನವಂಬರ್ 2 ರಂದು ನಡೆಯಲಿರುವ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನಡೆಯಲಿದೆ.

ಈ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನವೆ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣ ಅಧಿಕಾರಿ ಆರ್.ರಾಮಾಂಜಿನಪ್ಪ ತಿಳಿಸಿದ್ದಾರೆ.

ನಾಮ ಪತ್ರಗಳನ್ನು ಸಲ್ಲಿಸಲು ಅ.25 ಕೊನೆಯ ದಿನವಾಗಿದೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಅ.27 ಕೊನೆಯ ದಿನ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ತಾಲ್ಲೂಕಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರೊಂದಿಗು ಮೈತ್ರಿ ಇಲ್ಲದೆ ಎಲ್ಲಾ 13 ಸ್ಥಾನಗಳಿಗು ತಮ್ಮ ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದೆ.

‘ಎ’ ತರಗತಿಯಿಂದ ಎಲ್ಲಾ ಐದು ಸ್ಥಾನಗಳಿಗು ಕಾಂಗ್ರೆಸ್ ಅಭ್ಯರ್ಥಿಗಳು ಮೊದಲ ದಿನವೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ರಾಜ್ಯ ರೈತ ಸಂಘವು ಎಲ್ಲಾ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಮೀಸಲಾಗಿರುವ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಎನ್‌ಡಿಎ ಬಣದಲ್ಲಿ ‘ಬಿ’ ತರಗತಿಯಿಂದ ಜೆಡಿಎಸ್ ಪಕ್ಷಕ್ಕೆ 5 ಹಾಗೂ ಬಿಜೆಪಿ ಪಕ್ಷಕ್ಕೆ 3 ಸ್ಥಾನಗಳಂತೆ ಹಂಚಿಕೆಯಾಗಿವೆ. ಹಾಗೆಯೇ ‘ಎ’ ತರಗತಿಯಿಂದ ಜೆಡಿಎಸ್ 2, ಬಿಜೆಪಿ 3 ಸ್ಥಾನ ಹಂಚಿಕೆ ಮಾಡಿಕೊಂಡಿವೆ.

ಅ.24 ರಿಂದ(ಶುಕ್ರವಾರ) ತಾಲ್ಲೂಕಿನ ತೂಬಗೆರೆ ಹೋಬಳಿಯ ಸಾಧುಮಠದಲ್ಲಿ ಬೆಳಿಗ್ಗೆ 10 ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಎನ್‌ಡಿಎ ಅಭ್ಯರ್ಥಿಗಳು ಒಟ್ಟಾಗಿ ಚುನಾವಣ ಪ್ರಚಾರ ಪ್ರಾರಂಭಿಸಲಿದ್ದಾರೆ.

ಈ ಬಾರಿ ಟಿಎಪಿಎಂಸಿಎಸ್ ಚುನಾವಣೆ ಕಣ ಹಿಂದೆಂದಿಗಿಂತಲು ಹೆಚ್ಚು ರಂಗೇರಿದೆ. ತಾಲ್ಲೂಕಿನಲ್ಲಿ ಮುಂದಿನಗಳಲ್ಲಿ ಬರಲಿರುವ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಟಿಎಪಿಎಂಸಿಎಸ್ ಎನ್‌ಡಿಎ ಮೈತ್ರಿ ದಿಕ್ಸೂಚಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago