ನ.2ಕ್ಕೆ ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭ: ಮೊದಲ ದಿನ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ನವಂಬರ್ 2 ರಂದು ನಡೆಯಲಿರುವ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನಡೆಯಲಿದೆ.

ಈ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನವೆ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣ ಅಧಿಕಾರಿ ಆರ್.ರಾಮಾಂಜಿನಪ್ಪ ತಿಳಿಸಿದ್ದಾರೆ.

ನಾಮ ಪತ್ರಗಳನ್ನು ಸಲ್ಲಿಸಲು ಅ.25 ಕೊನೆಯ ದಿನವಾಗಿದೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಅ.27 ಕೊನೆಯ ದಿನ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ತಾಲ್ಲೂಕಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರೊಂದಿಗು ಮೈತ್ರಿ ಇಲ್ಲದೆ ಎಲ್ಲಾ 13 ಸ್ಥಾನಗಳಿಗು ತಮ್ಮ ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದೆ.

‘ಎ’ ತರಗತಿಯಿಂದ ಎಲ್ಲಾ ಐದು ಸ್ಥಾನಗಳಿಗು ಕಾಂಗ್ರೆಸ್ ಅಭ್ಯರ್ಥಿಗಳು ಮೊದಲ ದಿನವೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ರಾಜ್ಯ ರೈತ ಸಂಘವು ಎಲ್ಲಾ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಮೀಸಲಾಗಿರುವ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಎನ್‌ಡಿಎ ಬಣದಲ್ಲಿ ‘ಬಿ’ ತರಗತಿಯಿಂದ ಜೆಡಿಎಸ್ ಪಕ್ಷಕ್ಕೆ 5 ಹಾಗೂ ಬಿಜೆಪಿ ಪಕ್ಷಕ್ಕೆ 3 ಸ್ಥಾನಗಳಂತೆ ಹಂಚಿಕೆಯಾಗಿವೆ. ಹಾಗೆಯೇ ‘ಎ’ ತರಗತಿಯಿಂದ ಜೆಡಿಎಸ್ 2, ಬಿಜೆಪಿ 3 ಸ್ಥಾನ ಹಂಚಿಕೆ ಮಾಡಿಕೊಂಡಿವೆ.

ಅ.24 ರಿಂದ(ಶುಕ್ರವಾರ) ತಾಲ್ಲೂಕಿನ ತೂಬಗೆರೆ ಹೋಬಳಿಯ ಸಾಧುಮಠದಲ್ಲಿ ಬೆಳಿಗ್ಗೆ 10 ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಎನ್‌ಡಿಎ ಅಭ್ಯರ್ಥಿಗಳು ಒಟ್ಟಾಗಿ ಚುನಾವಣ ಪ್ರಚಾರ ಪ್ರಾರಂಭಿಸಲಿದ್ದಾರೆ.

ಈ ಬಾರಿ ಟಿಎಪಿಎಂಸಿಎಸ್ ಚುನಾವಣೆ ಕಣ ಹಿಂದೆಂದಿಗಿಂತಲು ಹೆಚ್ಚು ರಂಗೇರಿದೆ. ತಾಲ್ಲೂಕಿನಲ್ಲಿ ಮುಂದಿನಗಳಲ್ಲಿ ಬರಲಿರುವ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಟಿಎಪಿಎಂಸಿಎಸ್ ಎನ್‌ಡಿಎ ಮೈತ್ರಿ ದಿಕ್ಸೂಚಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

14 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago