ನ.2ಕ್ಕೆ ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭ: ಮೊದಲ ದಿನ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ನವಂಬರ್ 2 ರಂದು ನಡೆಯಲಿರುವ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನಡೆಯಲಿದೆ.

ಈ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನವೆ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣ ಅಧಿಕಾರಿ ಆರ್.ರಾಮಾಂಜಿನಪ್ಪ ತಿಳಿಸಿದ್ದಾರೆ.

ನಾಮ ಪತ್ರಗಳನ್ನು ಸಲ್ಲಿಸಲು ಅ.25 ಕೊನೆಯ ದಿನವಾಗಿದೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಅ.27 ಕೊನೆಯ ದಿನ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ತಾಲ್ಲೂಕಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರೊಂದಿಗು ಮೈತ್ರಿ ಇಲ್ಲದೆ ಎಲ್ಲಾ 13 ಸ್ಥಾನಗಳಿಗು ತಮ್ಮ ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದೆ.

‘ಎ’ ತರಗತಿಯಿಂದ ಎಲ್ಲಾ ಐದು ಸ್ಥಾನಗಳಿಗು ಕಾಂಗ್ರೆಸ್ ಅಭ್ಯರ್ಥಿಗಳು ಮೊದಲ ದಿನವೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ರಾಜ್ಯ ರೈತ ಸಂಘವು ಎಲ್ಲಾ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಮೀಸಲಾಗಿರುವ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಎನ್‌ಡಿಎ ಬಣದಲ್ಲಿ ‘ಬಿ’ ತರಗತಿಯಿಂದ ಜೆಡಿಎಸ್ ಪಕ್ಷಕ್ಕೆ 5 ಹಾಗೂ ಬಿಜೆಪಿ ಪಕ್ಷಕ್ಕೆ 3 ಸ್ಥಾನಗಳಂತೆ ಹಂಚಿಕೆಯಾಗಿವೆ. ಹಾಗೆಯೇ ‘ಎ’ ತರಗತಿಯಿಂದ ಜೆಡಿಎಸ್ 2, ಬಿಜೆಪಿ 3 ಸ್ಥಾನ ಹಂಚಿಕೆ ಮಾಡಿಕೊಂಡಿವೆ.

ಅ.24 ರಿಂದ(ಶುಕ್ರವಾರ) ತಾಲ್ಲೂಕಿನ ತೂಬಗೆರೆ ಹೋಬಳಿಯ ಸಾಧುಮಠದಲ್ಲಿ ಬೆಳಿಗ್ಗೆ 10 ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಎನ್‌ಡಿಎ ಅಭ್ಯರ್ಥಿಗಳು ಒಟ್ಟಾಗಿ ಚುನಾವಣ ಪ್ರಚಾರ ಪ್ರಾರಂಭಿಸಲಿದ್ದಾರೆ.

ಈ ಬಾರಿ ಟಿಎಪಿಎಂಸಿಎಸ್ ಚುನಾವಣೆ ಕಣ ಹಿಂದೆಂದಿಗಿಂತಲು ಹೆಚ್ಚು ರಂಗೇರಿದೆ. ತಾಲ್ಲೂಕಿನಲ್ಲಿ ಮುಂದಿನಗಳಲ್ಲಿ ಬರಲಿರುವ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಟಿಎಪಿಎಂಸಿಎಸ್ ಎನ್‌ಡಿಎ ಮೈತ್ರಿ ದಿಕ್ಸೂಚಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago