ನ.2ಕ್ಕೆ ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭ: ಮೊದಲ ದಿನ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ನವಂಬರ್ 2 ರಂದು ನಡೆಯಲಿರುವ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನಡೆಯಲಿದೆ.

ಈ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಗುರುವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನವೆ ‘ಎ’ ತರಗತಿಯಿಂದ 9 ಜನ ಹಾಗೂ ‘ಬಿ’ ತರಗತಿಯಿಂದ 26 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣ ಅಧಿಕಾರಿ ಆರ್.ರಾಮಾಂಜಿನಪ್ಪ ತಿಳಿಸಿದ್ದಾರೆ.

ನಾಮ ಪತ್ರಗಳನ್ನು ಸಲ್ಲಿಸಲು ಅ.25 ಕೊನೆಯ ದಿನವಾಗಿದೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಅ.27 ಕೊನೆಯ ದಿನ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ತಾಲ್ಲೂಕಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರೊಂದಿಗು ಮೈತ್ರಿ ಇಲ್ಲದೆ ಎಲ್ಲಾ 13 ಸ್ಥಾನಗಳಿಗು ತಮ್ಮ ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದೆ.

‘ಎ’ ತರಗತಿಯಿಂದ ಎಲ್ಲಾ ಐದು ಸ್ಥಾನಗಳಿಗು ಕಾಂಗ್ರೆಸ್ ಅಭ್ಯರ್ಥಿಗಳು ಮೊದಲ ದಿನವೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ರಾಜ್ಯ ರೈತ ಸಂಘವು ಎಲ್ಲಾ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಮೀಸಲಾಗಿರುವ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಎನ್‌ಡಿಎ ಬಣದಲ್ಲಿ ‘ಬಿ’ ತರಗತಿಯಿಂದ ಜೆಡಿಎಸ್ ಪಕ್ಷಕ್ಕೆ 5 ಹಾಗೂ ಬಿಜೆಪಿ ಪಕ್ಷಕ್ಕೆ 3 ಸ್ಥಾನಗಳಂತೆ ಹಂಚಿಕೆಯಾಗಿವೆ. ಹಾಗೆಯೇ ‘ಎ’ ತರಗತಿಯಿಂದ ಜೆಡಿಎಸ್ 2, ಬಿಜೆಪಿ 3 ಸ್ಥಾನ ಹಂಚಿಕೆ ಮಾಡಿಕೊಂಡಿವೆ.

ಅ.24 ರಿಂದ(ಶುಕ್ರವಾರ) ತಾಲ್ಲೂಕಿನ ತೂಬಗೆರೆ ಹೋಬಳಿಯ ಸಾಧುಮಠದಲ್ಲಿ ಬೆಳಿಗ್ಗೆ 10 ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಎನ್‌ಡಿಎ ಅಭ್ಯರ್ಥಿಗಳು ಒಟ್ಟಾಗಿ ಚುನಾವಣ ಪ್ರಚಾರ ಪ್ರಾರಂಭಿಸಲಿದ್ದಾರೆ.

ಈ ಬಾರಿ ಟಿಎಪಿಎಂಸಿಎಸ್ ಚುನಾವಣೆ ಕಣ ಹಿಂದೆಂದಿಗಿಂತಲು ಹೆಚ್ಚು ರಂಗೇರಿದೆ. ತಾಲ್ಲೂಕಿನಲ್ಲಿ ಮುಂದಿನಗಳಲ್ಲಿ ಬರಲಿರುವ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಟಿಎಪಿಎಂಸಿಎಸ್ ಎನ್‌ಡಿಎ ಮೈತ್ರಿ ದಿಕ್ಸೂಚಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

8 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

13 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

20 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

2 days ago