ನ.25ಕ್ಕೆ ‘ಕನ್ನಡ ಜ್ಯೋತಿ ರಥ’ ಆಗಮನ- ನ.26ರಂದು ನಗರದಲ್ಲಿ ಕನ್ನಡ ಜ್ಯೋತಿ ರಥ ಮೆರವಣಿಗೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಕನ್ನಡ ಜ್ಯೋತಿ ರಥ’ ದೊಡ್ಡಬಳ್ಳಾಪುರ ತಾಲ್ಲೂಕಿಗೆ ನ.25 ರಂದು ಸೋಮವಾರ ಆಗಮಿಸುತ್ತದೆ. ನ.26 ರಂದು  ದೊಡ್ಡಬಳ್ಳಾಪುರ ನಗರದಲ್ಲಿ ಕನ್ನಡ ರಥದ ಮೆರವಣಿಗೆ ನಡೆಯಲಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ  ನಡೆದ ಅಖಿಲ ಭಾರತ ಕನ್ನಡ‌ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯುವ ಕನ್ನಡ ರಥ ಮೆರವಣಿಗೆ ಪೂರ್ವ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನ.25 ರಂದು ಸೋಮವಾರ ದೇವನಹಳ್ಳಿ ತಾಲ್ಲೂಕಿನ ಮೂಲಕ ಆಗಮಿಸುವ ಕನ್ನಡ ರಥ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ನಂತರ ದೊಡ್ಡಬಳ್ಳಾಪುರ ನಗರದಲ್ಲಿ ವಾಸ್ತವ್ಯ ಇರುತ್ತದೆ. ನ.26 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಗೆ ದೊಡ್ಡಬಳ್ಳಾಪುರ ನಗರದಲ್ಲಿ ಕನ್ನಡ ರಥದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಕಲಾ ತಂಡಗಳು, ಕನ್ನಡ ಅಭಿಮಾನಿಗಳು, ಕನ್ನಡಪರ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಂಡ್ಯದಲ್ಲಿ ಡಿ.20,21 ಮತ್ತು 22 ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಜ್ಯೋತಿ ರಥವು ಸಂಚರಿಸುತ್ತದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಕನ್ನಡ ರಥ ಸಂಚಾರಿಸುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನ.25 ರಂದು ಮಂಗಳವಾರ ಸಂಚರಿಸುವ ಕನ್ನಡ ರಥದ ಮೆರವಣಿಗೆ, ನ.26 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಸಂಚರಿಸಲಿದೆ. ಬಸವಭವನ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ತಾಲ್ಲೂಕು ಕಛೇರಿ ವೃತ್ತ, ಮಗುವಾಳಪ್ಪ ವೃತ್ತ, ಇಸ್ಲಾಂಪುರ ರಸ್ತೆ, ಕೊಂಗಾಡಿಯಪ್ಪ ಕಾಲೇಜು‌ ರಸ್ತೆ, ಬಯಲುಬಸವಣ್ಣ ದೇವಸ್ಥಾನ, ಕನಕದಾಸ ವೃತ್ತದ ಮೂಲಕ‌ ‌ಮಧುರೆ ಹೋಬಳಿಯ ಕನಸವಾಡಿಗೆ ತೆರಳಲಿದೆ. ಮಧ್ಯಾಹ್ನದ ನಂತರ ನೆಲಮಂಗಲ ತಾಲ್ಲೂಕಿಗೆ ಕನ್ನಡ ರಥವನ್ನು ಬೀಳ್ಕೊಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಮತ್ತು ತಹಶಿಲ್ದಾರರ ಅದ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸುವ ಕನ್ನಡ ರಥವನ್ನು ಸಕಾಲ ಗೌರವದೊಂದಿಗೆ ಸ್ವಾಗತಿಸಲಾಗುವುದು. ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದರು.

ಪೂರ್ವ ಸಿದ್ದತಾ ಸಭೆಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

12 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

12 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

18 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago