ನ.25ಕ್ಕೆ ‘ಕನ್ನಡ ಜ್ಯೋತಿ ರಥ’ ಆಗಮನ- ನ.26ರಂದು ನಗರದಲ್ಲಿ ಕನ್ನಡ ಜ್ಯೋತಿ ರಥ ಮೆರವಣಿಗೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಕನ್ನಡ ಜ್ಯೋತಿ ರಥ’ ದೊಡ್ಡಬಳ್ಳಾಪುರ ತಾಲ್ಲೂಕಿಗೆ ನ.25 ರಂದು ಸೋಮವಾರ ಆಗಮಿಸುತ್ತದೆ. ನ.26 ರಂದು  ದೊಡ್ಡಬಳ್ಳಾಪುರ ನಗರದಲ್ಲಿ ಕನ್ನಡ ರಥದ ಮೆರವಣಿಗೆ ನಡೆಯಲಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ  ನಡೆದ ಅಖಿಲ ಭಾರತ ಕನ್ನಡ‌ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯುವ ಕನ್ನಡ ರಥ ಮೆರವಣಿಗೆ ಪೂರ್ವ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನ.25 ರಂದು ಸೋಮವಾರ ದೇವನಹಳ್ಳಿ ತಾಲ್ಲೂಕಿನ ಮೂಲಕ ಆಗಮಿಸುವ ಕನ್ನಡ ರಥ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ನಂತರ ದೊಡ್ಡಬಳ್ಳಾಪುರ ನಗರದಲ್ಲಿ ವಾಸ್ತವ್ಯ ಇರುತ್ತದೆ. ನ.26 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಗೆ ದೊಡ್ಡಬಳ್ಳಾಪುರ ನಗರದಲ್ಲಿ ಕನ್ನಡ ರಥದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಕಲಾ ತಂಡಗಳು, ಕನ್ನಡ ಅಭಿಮಾನಿಗಳು, ಕನ್ನಡಪರ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಂಡ್ಯದಲ್ಲಿ ಡಿ.20,21 ಮತ್ತು 22 ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಜ್ಯೋತಿ ರಥವು ಸಂಚರಿಸುತ್ತದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಕನ್ನಡ ರಥ ಸಂಚಾರಿಸುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನ.25 ರಂದು ಮಂಗಳವಾರ ಸಂಚರಿಸುವ ಕನ್ನಡ ರಥದ ಮೆರವಣಿಗೆ, ನ.26 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಸಂಚರಿಸಲಿದೆ. ಬಸವಭವನ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ತಾಲ್ಲೂಕು ಕಛೇರಿ ವೃತ್ತ, ಮಗುವಾಳಪ್ಪ ವೃತ್ತ, ಇಸ್ಲಾಂಪುರ ರಸ್ತೆ, ಕೊಂಗಾಡಿಯಪ್ಪ ಕಾಲೇಜು‌ ರಸ್ತೆ, ಬಯಲುಬಸವಣ್ಣ ದೇವಸ್ಥಾನ, ಕನಕದಾಸ ವೃತ್ತದ ಮೂಲಕ‌ ‌ಮಧುರೆ ಹೋಬಳಿಯ ಕನಸವಾಡಿಗೆ ತೆರಳಲಿದೆ. ಮಧ್ಯಾಹ್ನದ ನಂತರ ನೆಲಮಂಗಲ ತಾಲ್ಲೂಕಿಗೆ ಕನ್ನಡ ರಥವನ್ನು ಬೀಳ್ಕೊಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಮತ್ತು ತಹಶಿಲ್ದಾರರ ಅದ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸುವ ಕನ್ನಡ ರಥವನ್ನು ಸಕಾಲ ಗೌರವದೊಂದಿಗೆ ಸ್ವಾಗತಿಸಲಾಗುವುದು. ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದರು.

ಪೂರ್ವ ಸಿದ್ದತಾ ಸಭೆಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

15 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 days ago