Categories: ರಾಜ್ಯ

ಪಂಚಾಯತಿ ಕಾರ್ಯದರ್ಶಿಯ ಬ್ಯಾಂಕ್ ಖಾತೆ ಹ್ಯಾಕ್; 8 ಲಕ್ಷ ರೂ. ವಂಚನೆ

ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣವನ್ನು ಲಪಟಾಯಿಸಿದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ವಂಚನೆಗೆ ಒಳಗಾದವರು ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಾಗಿದ್ದಾರೆ. ಈ ಬಗ್ಗೆ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನಾಂಕ 24-12-2025 ರಂದು ದೂರುದಾರರ ಎಸ್.ಬಿ.ಐ (SBI) ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ ತಲಾ 900 ರೂ. ನಂತೆ ಮೂರು ಬಾರಿ ಒಟ್ಟು 2,700 ರೂ. ಕಡಿತವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅವರು ಸೈಬರ್ ದೂರು ನೀಡಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು (Freeze) ನಂತರ ದಿನಾಂಕ 26-12-2025 ರಂದು ಅವರು ಬ್ಯಾಂಕ್‌ಗೆ ತೆರಳಿ ತಮ್ಮ ಖಾತೆಯನ್ನು ಪುನಃ ಚಾಲನೆಗೊಳಿಸಿದ್ದರು (Unfreeze) ಆದರೆ ಅಂದು ಸಂಜೆ 7 ಗಂಟೆಯ ಸುಮಾರಿಗೆ ಹ್ಯಾಕರ್ಗಳು ತಮ್ಮ ಕೈಚಳಕ ತೋರಿಸಿದ್ದು, ಖಾತೆಯಲ್ಲಿದ್ದ ಹಣವನ್ನು ಹಂತ ಹಂತವಾಗಿ ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ.

ಆರೋಪಿಗಳು ಮೊದಲ ಹಂತದಲ್ಲಿ 1.94 ಲಕ್ಷ, 1.95 ಲಕ್ಷ ಮತ್ತು 68 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ತದನಂತರ ಖಾತೆಗೆ ಜಮೆಯಾದ ಹಣದಲ್ಲೂ 1.85 ಲಕ್ಷ ಮತ್ತು 1.58 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ. ಹೀಗೆ ಒಟ್ಟಾರೆಯಾಗಿ ಖಾತೆಯಲ್ಲಿದ್ದ 8,02,700 ರೂ. ಹಣವನ್ನು ದೋಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕಂಪ್ಯೂಟರ್ ಸಾಧನಗಳನ್ನು ಬಳಸಿ, ಗ್ರಾಹಕರಂತೆಯೇ ನಟಿಸಿ ಈ ಕೃತ್ಯ ಎಸಗಿದ್ದಾರೆ.

ದೂರುದಾರರ ಹೇಳಿಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ:
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಣ್ಣ ಮೊತ್ತದ ಅನುಮಾನಾಸ್ಪದ ವ್ಯವಹಾರ ಕಂಡುಬಂದರೂ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಪೊಲೀಸರಿಗೆ ಮಾಹಿತಿ ನೀಡಿ. ಪಾಸ್‌ವರ್ಡ್ ಮತ್ತು ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

46 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago