Categories: ರಾಜ್ಯ

ಪಂಚಾಯತಿ ಕಾರ್ಯದರ್ಶಿಯ ಬ್ಯಾಂಕ್ ಖಾತೆ ಹ್ಯಾಕ್; 8 ಲಕ್ಷ ರೂ. ವಂಚನೆ

ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣವನ್ನು ಲಪಟಾಯಿಸಿದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ವಂಚನೆಗೆ ಒಳಗಾದವರು ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಾಗಿದ್ದಾರೆ. ಈ ಬಗ್ಗೆ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನಾಂಕ 24-12-2025 ರಂದು ದೂರುದಾರರ ಎಸ್.ಬಿ.ಐ (SBI) ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ ತಲಾ 900 ರೂ. ನಂತೆ ಮೂರು ಬಾರಿ ಒಟ್ಟು 2,700 ರೂ. ಕಡಿತವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅವರು ಸೈಬರ್ ದೂರು ನೀಡಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು (Freeze) ನಂತರ ದಿನಾಂಕ 26-12-2025 ರಂದು ಅವರು ಬ್ಯಾಂಕ್‌ಗೆ ತೆರಳಿ ತಮ್ಮ ಖಾತೆಯನ್ನು ಪುನಃ ಚಾಲನೆಗೊಳಿಸಿದ್ದರು (Unfreeze) ಆದರೆ ಅಂದು ಸಂಜೆ 7 ಗಂಟೆಯ ಸುಮಾರಿಗೆ ಹ್ಯಾಕರ್ಗಳು ತಮ್ಮ ಕೈಚಳಕ ತೋರಿಸಿದ್ದು, ಖಾತೆಯಲ್ಲಿದ್ದ ಹಣವನ್ನು ಹಂತ ಹಂತವಾಗಿ ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ.

ಆರೋಪಿಗಳು ಮೊದಲ ಹಂತದಲ್ಲಿ 1.94 ಲಕ್ಷ, 1.95 ಲಕ್ಷ ಮತ್ತು 68 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ತದನಂತರ ಖಾತೆಗೆ ಜಮೆಯಾದ ಹಣದಲ್ಲೂ 1.85 ಲಕ್ಷ ಮತ್ತು 1.58 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ. ಹೀಗೆ ಒಟ್ಟಾರೆಯಾಗಿ ಖಾತೆಯಲ್ಲಿದ್ದ 8,02,700 ರೂ. ಹಣವನ್ನು ದೋಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕಂಪ್ಯೂಟರ್ ಸಾಧನಗಳನ್ನು ಬಳಸಿ, ಗ್ರಾಹಕರಂತೆಯೇ ನಟಿಸಿ ಈ ಕೃತ್ಯ ಎಸಗಿದ್ದಾರೆ.

ದೂರುದಾರರ ಹೇಳಿಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ:
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಣ್ಣ ಮೊತ್ತದ ಅನುಮಾನಾಸ್ಪದ ವ್ಯವಹಾರ ಕಂಡುಬಂದರೂ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಪೊಲೀಸರಿಗೆ ಮಾಹಿತಿ ನೀಡಿ. ಪಾಸ್‌ವರ್ಡ್ ಮತ್ತು ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

5 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago