ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣವನ್ನು ಲಪಟಾಯಿಸಿದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
ವಂಚನೆಗೆ ಒಳಗಾದವರು ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಾಗಿದ್ದಾರೆ. ಈ ಬಗ್ಗೆ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಿನಾಂಕ 24-12-2025 ರಂದು ದೂರುದಾರರ ಎಸ್.ಬಿ.ಐ (SBI) ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ ತಲಾ 900 ರೂ. ನಂತೆ ಮೂರು ಬಾರಿ ಒಟ್ಟು 2,700 ರೂ. ಕಡಿತವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅವರು ಸೈಬರ್ ದೂರು ನೀಡಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು (Freeze) ನಂತರ ದಿನಾಂಕ 26-12-2025 ರಂದು ಅವರು ಬ್ಯಾಂಕ್ಗೆ ತೆರಳಿ ತಮ್ಮ ಖಾತೆಯನ್ನು ಪುನಃ ಚಾಲನೆಗೊಳಿಸಿದ್ದರು (Unfreeze) ಆದರೆ ಅಂದು ಸಂಜೆ 7 ಗಂಟೆಯ ಸುಮಾರಿಗೆ ಹ್ಯಾಕರ್ಗಳು ತಮ್ಮ ಕೈಚಳಕ ತೋರಿಸಿದ್ದು, ಖಾತೆಯಲ್ಲಿದ್ದ ಹಣವನ್ನು ಹಂತ ಹಂತವಾಗಿ ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ.
ಆರೋಪಿಗಳು ಮೊದಲ ಹಂತದಲ್ಲಿ 1.94 ಲಕ್ಷ, 1.95 ಲಕ್ಷ ಮತ್ತು 68 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ತದನಂತರ ಖಾತೆಗೆ ಜಮೆಯಾದ ಹಣದಲ್ಲೂ 1.85 ಲಕ್ಷ ಮತ್ತು 1.58 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ. ಹೀಗೆ ಒಟ್ಟಾರೆಯಾಗಿ ಖಾತೆಯಲ್ಲಿದ್ದ 8,02,700 ರೂ. ಹಣವನ್ನು ದೋಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕಂಪ್ಯೂಟರ್ ಸಾಧನಗಳನ್ನು ಬಳಸಿ, ಗ್ರಾಹಕರಂತೆಯೇ ನಟಿಸಿ ಈ ಕೃತ್ಯ ಎಸಗಿದ್ದಾರೆ.
ದೂರುದಾರರ ಹೇಳಿಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸಾರ್ವಜನಿಕರಿಗೆ ಎಚ್ಚರಿಕೆ:
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಣ್ಣ ಮೊತ್ತದ ಅನುಮಾನಾಸ್ಪದ ವ್ಯವಹಾರ ಕಂಡುಬಂದರೂ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಪೊಲೀಸರಿಗೆ ಮಾಹಿತಿ ನೀಡಿ. ಪಾಸ್ವರ್ಡ್ ಮತ್ತು ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…