Categories: ರಾಜ್ಯ

ಪಂಚಾಯತಿ ಕಾರ್ಯದರ್ಶಿಯ ಬ್ಯಾಂಕ್ ಖಾತೆ ಹ್ಯಾಕ್; 8 ಲಕ್ಷ ರೂ. ವಂಚನೆ

ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣವನ್ನು ಲಪಟಾಯಿಸಿದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ವಂಚನೆಗೆ ಒಳಗಾದವರು ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಾಗಿದ್ದಾರೆ. ಈ ಬಗ್ಗೆ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನಾಂಕ 24-12-2025 ರಂದು ದೂರುದಾರರ ಎಸ್.ಬಿ.ಐ (SBI) ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ ತಲಾ 900 ರೂ. ನಂತೆ ಮೂರು ಬಾರಿ ಒಟ್ಟು 2,700 ರೂ. ಕಡಿತವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅವರು ಸೈಬರ್ ದೂರು ನೀಡಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು (Freeze) ನಂತರ ದಿನಾಂಕ 26-12-2025 ರಂದು ಅವರು ಬ್ಯಾಂಕ್‌ಗೆ ತೆರಳಿ ತಮ್ಮ ಖಾತೆಯನ್ನು ಪುನಃ ಚಾಲನೆಗೊಳಿಸಿದ್ದರು (Unfreeze) ಆದರೆ ಅಂದು ಸಂಜೆ 7 ಗಂಟೆಯ ಸುಮಾರಿಗೆ ಹ್ಯಾಕರ್ಗಳು ತಮ್ಮ ಕೈಚಳಕ ತೋರಿಸಿದ್ದು, ಖಾತೆಯಲ್ಲಿದ್ದ ಹಣವನ್ನು ಹಂತ ಹಂತವಾಗಿ ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ.

ಆರೋಪಿಗಳು ಮೊದಲ ಹಂತದಲ್ಲಿ 1.94 ಲಕ್ಷ, 1.95 ಲಕ್ಷ ಮತ್ತು 68 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ತದನಂತರ ಖಾತೆಗೆ ಜಮೆಯಾದ ಹಣದಲ್ಲೂ 1.85 ಲಕ್ಷ ಮತ್ತು 1.58 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ. ಹೀಗೆ ಒಟ್ಟಾರೆಯಾಗಿ ಖಾತೆಯಲ್ಲಿದ್ದ 8,02,700 ರೂ. ಹಣವನ್ನು ದೋಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕಂಪ್ಯೂಟರ್ ಸಾಧನಗಳನ್ನು ಬಳಸಿ, ಗ್ರಾಹಕರಂತೆಯೇ ನಟಿಸಿ ಈ ಕೃತ್ಯ ಎಸಗಿದ್ದಾರೆ.

ದೂರುದಾರರ ಹೇಳಿಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ:
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಣ್ಣ ಮೊತ್ತದ ಅನುಮಾನಾಸ್ಪದ ವ್ಯವಹಾರ ಕಂಡುಬಂದರೂ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಪೊಲೀಸರಿಗೆ ಮಾಹಿತಿ ನೀಡಿ. ಪಾಸ್‌ವರ್ಡ್ ಮತ್ತು ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

13 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

14 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

20 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago