ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣವನ್ನು ಲಪಟಾಯಿಸಿದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
ವಂಚನೆಗೆ ಒಳಗಾದವರು ಭಟ್ಕಳ ತಾಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಾಗಿದ್ದಾರೆ. ಈ ಬಗ್ಗೆ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಿನಾಂಕ 24-12-2025 ರಂದು ದೂರುದಾರರ ಎಸ್.ಬಿ.ಐ (SBI) ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ ತಲಾ 900 ರೂ. ನಂತೆ ಮೂರು ಬಾರಿ ಒಟ್ಟು 2,700 ರೂ. ಕಡಿತವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅವರು ಸೈಬರ್ ದೂರು ನೀಡಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು (Freeze) ನಂತರ ದಿನಾಂಕ 26-12-2025 ರಂದು ಅವರು ಬ್ಯಾಂಕ್ಗೆ ತೆರಳಿ ತಮ್ಮ ಖಾತೆಯನ್ನು ಪುನಃ ಚಾಲನೆಗೊಳಿಸಿದ್ದರು (Unfreeze) ಆದರೆ ಅಂದು ಸಂಜೆ 7 ಗಂಟೆಯ ಸುಮಾರಿಗೆ ಹ್ಯಾಕರ್ಗಳು ತಮ್ಮ ಕೈಚಳಕ ತೋರಿಸಿದ್ದು, ಖಾತೆಯಲ್ಲಿದ್ದ ಹಣವನ್ನು ಹಂತ ಹಂತವಾಗಿ ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ.
ಆರೋಪಿಗಳು ಮೊದಲ ಹಂತದಲ್ಲಿ 1.94 ಲಕ್ಷ, 1.95 ಲಕ್ಷ ಮತ್ತು 68 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ತದನಂತರ ಖಾತೆಗೆ ಜಮೆಯಾದ ಹಣದಲ್ಲೂ 1.85 ಲಕ್ಷ ಮತ್ತು 1.58 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ. ಹೀಗೆ ಒಟ್ಟಾರೆಯಾಗಿ ಖಾತೆಯಲ್ಲಿದ್ದ 8,02,700 ರೂ. ಹಣವನ್ನು ದೋಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕಂಪ್ಯೂಟರ್ ಸಾಧನಗಳನ್ನು ಬಳಸಿ, ಗ್ರಾಹಕರಂತೆಯೇ ನಟಿಸಿ ಈ ಕೃತ್ಯ ಎಸಗಿದ್ದಾರೆ.
ದೂರುದಾರರ ಹೇಳಿಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸಾರ್ವಜನಿಕರಿಗೆ ಎಚ್ಚರಿಕೆ:
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಣ್ಣ ಮೊತ್ತದ ಅನುಮಾನಾಸ್ಪದ ವ್ಯವಹಾರ ಕಂಡುಬಂದರೂ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಪೊಲೀಸರಿಗೆ ಮಾಹಿತಿ ನೀಡಿ. ಪಾಸ್ವರ್ಡ್ ಮತ್ತು ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…