ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದ್ಧಟತನ: ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್ ಗಳಿಗೆ ಸಹಿ ಹಾಕದೇ ನಿರ್ಲಕ್ಷ್ಯ ಆರೋಪ: ಗುತ್ತಿಗೆದಾರರಿಂದ ಪ್ರತಿಭಟನೆ

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿ, ಸಂಸತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ, ವಿಧಾನ ಪರಿಷತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ ವ್ಯಾಪ್ತಿಗೆ ಬರುವ ತುಂಡು ಗುತ್ತಿಗೆ ಕಾಮಗಾರಿಗಳು ಪೂರ್ಣಗೊಂಡು ಮೂರು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ಇದರಿಂದ ನಾವೂ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಇಂದೂ‌ ಸಹ ಕಚೇರಿಗೆ ಬಂದು ಕೇಳಿದಾಗಲೂ ನಮ್ಮನ್ನು ನೋಡಿ ಎದ್ನೋ‌ಬಿದ್ನೋ ಎಂದು ಕಚೇರಿಯಿಂದ ಹೊರ ನಡೆದಿದ್ದಾರೆ. ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ‌ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ‌ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ‌ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ‌. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಮಯದ ಅಭಾವದಿಂದ ಕಾಮಗಾರಿಗಳ ಪರಿಶೀಲನೆ ಮಾಡಿ ಸಹಿ ಹಾಕಲು ಆಗಿಲ್ಲ ಹೊರೆತು ಉದ್ದೇಶಪೂರ್ವಕವಾಗಿಲ್ಲ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಬಿಲ್ ಗಳಿಗೆ ಸಹಿ ಹಾಕುವಂತೆ ಗಮನಕ್ಕೆ ತರಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜ್ ತಿಳಿಸಿದರು.

ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

2 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

7 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

8 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

18 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

18 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

18 hours ago