ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದ್ಧಟತನ: ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್ ಗಳಿಗೆ ಸಹಿ ಹಾಕದೇ ನಿರ್ಲಕ್ಷ್ಯ ಆರೋಪ: ಗುತ್ತಿಗೆದಾರರಿಂದ ಪ್ರತಿಭಟನೆ

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿ, ಸಂಸತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ, ವಿಧಾನ ಪರಿಷತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ ವ್ಯಾಪ್ತಿಗೆ ಬರುವ ತುಂಡು ಗುತ್ತಿಗೆ ಕಾಮಗಾರಿಗಳು ಪೂರ್ಣಗೊಂಡು ಮೂರು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ಇದರಿಂದ ನಾವೂ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಇಂದೂ‌ ಸಹ ಕಚೇರಿಗೆ ಬಂದು ಕೇಳಿದಾಗಲೂ ನಮ್ಮನ್ನು ನೋಡಿ ಎದ್ನೋ‌ಬಿದ್ನೋ ಎಂದು ಕಚೇರಿಯಿಂದ ಹೊರ ನಡೆದಿದ್ದಾರೆ. ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ‌ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ‌ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ‌ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ‌. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಮಯದ ಅಭಾವದಿಂದ ಕಾಮಗಾರಿಗಳ ಪರಿಶೀಲನೆ ಮಾಡಿ ಸಹಿ ಹಾಕಲು ಆಗಿಲ್ಲ ಹೊರೆತು ಉದ್ದೇಶಪೂರ್ವಕವಾಗಿಲ್ಲ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಬಿಲ್ ಗಳಿಗೆ ಸಹಿ ಹಾಕುವಂತೆ ಗಮನಕ್ಕೆ ತರಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜ್ ತಿಳಿಸಿದರು.

ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

4 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

7 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

8 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago