ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದ್ಧಟತನ: ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್ ಗಳಿಗೆ ಸಹಿ ಹಾಕದೇ ನಿರ್ಲಕ್ಷ್ಯ ಆರೋಪ: ಗುತ್ತಿಗೆದಾರರಿಂದ ಪ್ರತಿಭಟನೆ

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿ, ಸಂಸತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ, ವಿಧಾನ ಪರಿಷತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ ವ್ಯಾಪ್ತಿಗೆ ಬರುವ ತುಂಡು ಗುತ್ತಿಗೆ ಕಾಮಗಾರಿಗಳು ಪೂರ್ಣಗೊಂಡು ಮೂರು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ಇದರಿಂದ ನಾವೂ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಇಂದೂ‌ ಸಹ ಕಚೇರಿಗೆ ಬಂದು ಕೇಳಿದಾಗಲೂ ನಮ್ಮನ್ನು ನೋಡಿ ಎದ್ನೋ‌ಬಿದ್ನೋ ಎಂದು ಕಚೇರಿಯಿಂದ ಹೊರ ನಡೆದಿದ್ದಾರೆ. ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ‌ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ‌ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ‌ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ‌. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಮಯದ ಅಭಾವದಿಂದ ಕಾಮಗಾರಿಗಳ ಪರಿಶೀಲನೆ ಮಾಡಿ ಸಹಿ ಹಾಕಲು ಆಗಿಲ್ಲ ಹೊರೆತು ಉದ್ದೇಶಪೂರ್ವಕವಾಗಿಲ್ಲ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಬಿಲ್ ಗಳಿಗೆ ಸಹಿ ಹಾಕುವಂತೆ ಗಮನಕ್ಕೆ ತರಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜ್ ತಿಳಿಸಿದರು.

ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

7 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago