ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದ್ಧಟತನ: ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್ ಗಳಿಗೆ ಸಹಿ ಹಾಕದೇ ನಿರ್ಲಕ್ಷ್ಯ ಆರೋಪ: ಗುತ್ತಿಗೆದಾರರಿಂದ ಪ್ರತಿಭಟನೆ

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿ, ಸಂಸತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ, ವಿಧಾನ ಪರಿಷತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ ವ್ಯಾಪ್ತಿಗೆ ಬರುವ ತುಂಡು ಗುತ್ತಿಗೆ ಕಾಮಗಾರಿಗಳು ಪೂರ್ಣಗೊಂಡು ಮೂರು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ಇದರಿಂದ ನಾವೂ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಇಂದೂ‌ ಸಹ ಕಚೇರಿಗೆ ಬಂದು ಕೇಳಿದಾಗಲೂ ನಮ್ಮನ್ನು ನೋಡಿ ಎದ್ನೋ‌ಬಿದ್ನೋ ಎಂದು ಕಚೇರಿಯಿಂದ ಹೊರ ನಡೆದಿದ್ದಾರೆ. ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ‌ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ‌ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ‌ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ‌. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಮಯದ ಅಭಾವದಿಂದ ಕಾಮಗಾರಿಗಳ ಪರಿಶೀಲನೆ ಮಾಡಿ ಸಹಿ ಹಾಕಲು ಆಗಿಲ್ಲ ಹೊರೆತು ಉದ್ದೇಶಪೂರ್ವಕವಾಗಿಲ್ಲ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಬಿಲ್ ಗಳಿಗೆ ಸಹಿ ಹಾಕುವಂತೆ ಗಮನಕ್ಕೆ ತರಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜ್ ತಿಳಿಸಿದರು.

ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

16 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

17 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

23 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago