ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.
ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..
ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…