ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದ್ಧಟತನ: ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್ ಗಳಿಗೆ ಸಹಿ ಹಾಕದೇ ನಿರ್ಲಕ್ಷ್ಯ ಆರೋಪ: ಗುತ್ತಿಗೆದಾರರಿಂದ ಪ್ರತಿಭಟನೆ

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿ, ಸಂಸತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ, ವಿಧಾನ ಪರಿಷತ್ ಸದಸ್ಯರ ಸ್ಥಳೀಯಾಭಿವೃದ್ಧಿ ನಿಧಿ ವ್ಯಾಪ್ತಿಗೆ ಬರುವ ತುಂಡು ಗುತ್ತಿಗೆ ಕಾಮಗಾರಿಗಳು ಪೂರ್ಣಗೊಂಡು ಮೂರು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ಇದರಿಂದ ನಾವೂ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಇಂದೂ‌ ಸಹ ಕಚೇರಿಗೆ ಬಂದು ಕೇಳಿದಾಗಲೂ ನಮ್ಮನ್ನು ನೋಡಿ ಎದ್ನೋ‌ಬಿದ್ನೋ ಎಂದು ಕಚೇರಿಯಿಂದ ಹೊರ ನಡೆದಿದ್ದಾರೆ. ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ‌ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ‌ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ‌ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ‌. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಮಯದ ಅಭಾವದಿಂದ ಕಾಮಗಾರಿಗಳ ಪರಿಶೀಲನೆ ಮಾಡಿ ಸಹಿ ಹಾಕಲು ಆಗಿಲ್ಲ ಹೊರೆತು ಉದ್ದೇಶಪೂರ್ವಕವಾಗಿಲ್ಲ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಬಿಲ್ ಗಳಿಗೆ ಸಹಿ ಹಾಕುವಂತೆ ಗಮನಕ್ಕೆ ತರಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜ್ ತಿಳಿಸಿದರು.

ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

11 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

13 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

13 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

13 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

16 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

19 hours ago