ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರು ಕಳೆದ ಮೂರು ತಿಂಗಳಿಂದ ಗುತ್ತಿಗೆದಾರರ ಬಿಲ್, ಕ್ರಿಯಾಯೋಜನೆ, ಅಂದಾಜು ಪತ್ರಗಳಿಗೆ ಸಹಿ ಹಾಕದೆ ಮೀನಾಮೇಷವೆಣಿಸಿ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಆರೋಪಿಸಿದರು.
ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಅವರ ಕಾರ್ಯಪ್ರವೃತ್ತಿಯನ್ನು ಖಂಡಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹದೇಶ್ವರ್ ಉದ್ಧಟತನ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ, ಎಂಎಲ್ ಎ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನೆ ತಂದರೂ ಏನೂ ಉಪಯೋಗವಾಗಿಲ್ಲ. ಇಒ, ಎಂಎಲ್ ಎ ಹೇಳಿದರೂ ಈ ಅಧಿಕಾರಿ ಸಹಿ ಹಾಕದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..
ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವೇಳೆ ಏನಾದರೂ ಲೋಪ ಕಂಡುಬಂದಲ್ಲಿ ಬಿಲ್ ಗೆ ಸಹಿ ಹಾಕಬೇಡಿ, ಸ್ಥಳ ಪರಿಶೀಲನೆಯೂ ಮಾಡದೇ ಬಿಲ್ ಗೆ ಸಹಿ ಹಾಕದೇ ನಮಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದ್ದಲ್ಲದೇ, ಶುಕ್ರವಾರದೊಳಗೆ ಕಡ್ಡಾಯವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಗುತ್ತಿಗೆದಾರ ಚಿಕ್ಕನಹಳ್ಳಿ ಹರೀಶ್ ಮಾತನಾಡಿ, ಕಾಮಗಾರಿ ಮುಗಿದು ಮೂರ್ನಾಲ್ಕು ತಿಂಗಳುಗಳು ಕಳೆದರೂ ಬಿಲ್ ಗೆ ಸಹಿ ಹಾಕಿಲ್ಲ. ನಾವು ಜೀವನ ನಡೆಸುವುದು ಹೇಗೆ, ಸಮಸ್ಯೆ ಬಗ್ಗೆ ಹೇಳಲು ಬಂದಾಗ ಕಚೇರಿಯಿಂದ ಪಲಾಯನ ಮಾಡುವುದು ಸರಿಯಲ್ಲ. ಶಾಸಕರು, ಸಚಿವರು ಹೇಳಿದರೂ ಈವರೆಗೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ. ಇದು ಸರಿಯಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ನಿರ್ದೇಶಕರಾದ ಕೇಶವಮೂರ್ತಿ, ಹರೀಶ್, ಬೆಳವಂಗಲ ಹರೀಶ್, ಲಕ್ಕಣ್ಣ, ಗಂಗಹನುಮಯ್ಯ, ಭರತ್, ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…