‘ಪಂಚಾಯಿತಿಯನ್ನೂ ಸಹ ಗೆಲ್ಲಲು ಸಾಧ್ಯವಾಗದವರು… ಸ್ವ ಗ್ರಾಮದಲ್ಲೇ ಹೆಚ್ಚಿನ ಮತ ಪಡೆಯದವರು ಬೇರೆಯವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥ ಇಲ್ಲ’- ಜೆಡಿಎಸ್ ಮುಖಂಡರೊಬ್ಬರನ್ನ ಕುಟುಕಿದ ಶಾಸಕ ಧೀರಜ್ ಮುನಿರಾಜ್

ಪಂಚಾಯಿತಿಯನ್ನೂ ಸಹ ಗೆಲ್ಲಲು ಸಾಧ್ಯ ಇಲ್ಲದವರು ಹಾಗೂ ತಮ್ಮ ಗ್ರಾಮದಲ್ಲೇ ಹೆಚ್ಚಿನ ಮತ ಪಡೆಯಲು ಸಾಧ್ಯವಾಗದವರು ಬೇರೆಯವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಹೆಸರನ್ನು ಹೇಳದೇ ಪರೋಕ್ಷವಾಗಿ ಜೆಡಿಎಸ್ ಮುಖಂಡ ಹರೀಶ್‌ಗೌಡ ಅವರನ್ನು ಕುಟುಕಿದ ಶಾಸಕ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಇಬ್ಬರ ಪರಿಶ್ರಮದಿಂದಲೇ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಪಡೆಯಲು ಸಾಧ್ಯವಾಗಿದೆ ಎಂದರು.

ಆದರೆ, ಹರೀಶ್‌ಗೌಡ ಅವರು ಮಾಜಿ ಆಗಿದ್ದರು ಕೂಡ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕಾಗಿ ದುಡಿ- ಯುತ್ತಿರುವವರನ್ನು ಹಾಗೂ ಪಕ್ಷದ ಹಿರಿಯರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಹೇಳಿದರು.

ಪಕ್ಷದ ಹಿರಿಯರ ಬಗ್ಗೆ ಮಾತಾಡುವಾಗ ಹುಷಾರ್…!

ತಾಲೂಕಿನಲ್ಲಿ ಪಕ್ಷ ಕಟ್ಟಿ ಬೆಳೆಸಿದ ಪಕ್ಷದ ಹಿರಿಯರನ್ನು ಗೌರವದಿಂದ ಕಾಣಬೇಕು. ಅವರ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಇಷ್ಟಬಂದ ಹಾಗೇ ಮಾತನಾಡಬಾರದು. ಯಾರೂ ಏನೇ ಟೀಕೆ ಮಾಡಿದರು ಕೂಡ ಸಾರ್ವಜನಿಕ ಜೀವನದಲ್ಲಿ ಸೋಲು- ಗೆಲುವು ಸಾಮಾನ್ಯ. ಆದರೆ, ಅಭಿವೃದ್ಧಿ ಕೆಲಸ ಮೂಲಕ ಉತ್ತರ ನೀಡುತ್ತ ರಾಜಕಾರಣದಲ್ಲಿ ಇನ್ನೂ 50ವರ್ಷ ಕಾಲ ಇದ್ದೇ ಇರುತ್ತೇನೆ. ಮುಂದೆ ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡೇ ನೀಡುತ್ತೇನೆ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

6 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

6 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

9 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago