ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: ಕೋಟ್ಯಂತರ ನಗದು, ನಗ, ಐಷಾರಾಮಿ ವಾಚ್‌, ಕಾರು, ಮದ್ಯ ಸೇರಿದಂತೆ ಇತರೆ ವಸ್ತು ವಶ

ಪಂಜಾಬ್: ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) 8 ಲಕ್ಷ ರೂ.ಲಂಚ ಪ್ರಕರಣದಲ್ಲಿ ರೈಡ್ ಮಾಡಿ ಬಂಧಿಸಲಾಗಿತ್ತು. ಬಳಿಕ ಮನೆ ಪರಿಶೀಲನೆ ಮಾಡಿದಾಗ ತನಿಖಾಧಿಕಾಗಳು ಬೆಚ್ಚಿ ಬಿದಿದ್ದಾರೆ.

ಪರಿಶೀಲನೆ ವೇಳೆ ಬರೋಬ್ಬರಿ 5 ಕೋಟಿ ರೂ. ನಗದು, ಆಡಿ & ಮರ್ಸಿಡಿಸ್ ಕಾರು, 22 ಐಷಾರಾಮಿ ವಾಚ್‌ಗಳು, 1.5 ಕೆ.ಜಿ ಚಿನ್ನದ ಆಭರಣಗಳು ಸೇರಿ ಆಸ್ತಿ ದಾಖಲೆಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದೀಗ ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ.

ಭುಲ್ಲರ್, ಪಂಜಾಬ್‌ನ ರೋಪರ್ ಶ್ರೇಣಿಯಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟ‌ರ್ ಜನರಲ್‌ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಯಾಗಿದ್ದಾರೆ.

ಪಂಜಾಬ್‌ನ ಫತೇಘರ್ ಸಾಹಿಬ್‌ನಲ್ಲಿರುವ ಆಕಾಶ್ ಬಟ್ಟಾ ಎಂಬ ಸ್ಕ್ಯಾಪ್ ವ್ಯಾಪಾರಿ ಐದು ದಿನಗಳ ಹಿಂದೆ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಗುರುವಾರ ಸಿಬಿಐ ಈ ಪ್ರಕರಣವನ್ನು ದಾಖಲಿಸಿದೆ. ದೂರುದಾರರ ಪ್ರಕಾರ, ಡಿಐಜಿ ಅವರು ಆರಂಭಿಕ ಲಂಚವಾಗಿ 8 ಲಕ್ಷ ರೂ.ಗಳನ್ನು ಪಾವತಿಸದಿದ್ದರೆ ಮತ್ತು ನಂತರ ಮಾಸಿಕ ಪಾವತಿಗಳನ್ನು ಮಾಡದಿದ್ದರೆ ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಟ್ಟಾ ಆರೋಪಿಸಿದ್ದಾರೆ.

ಬಂಧಿತ ಭುಲ್ಲರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದಾಗ ತನಿಖಾ ಸಂಸ್ಥೆ ಸುಮಾರು 5 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ಇದಲ್ಲದೆ, ಅಧಿಕಾರಿಗಳು ಪಂಜಾಬ್‌ನಲ್ಲಿ ಸುಮಾರು 1.5 ಕೆಜಿ ಆಭರಣಗಳು, ಆಸ್ತಿ ದಾಖಲೆಗಳು ಮತ್ತು ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಎರಡು ಐಷಾರಾಮಿ ವಾಹನಗಳ (ಮರ್ಸಿಡಿಸ್ ಮತ್ತು ಆಡಿ) ಕೀಲಿಗಳು, 22 ಐಷಾರಾಮಿ ಕೈಗಡಿಯಾರಗಳು, ಲಾಕರ್ ಕೀಗಳು, 40 ಲೀಟರ್ ಆಮದು ಮಾಡಿಕೊಂಡ ಮದ್ಯ ಮತ್ತು ಒಂದು ಡಬಲ್ ಬ್ಯಾರೆಲ್ ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವ‌ರ್ ಮತ್ತು ಒಂದು ಏರ್‌ಗನ್ ಸೇರಿದಂತೆ ಬಂದೂಕುಗಳು ಸೇರಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

9 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

19 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

19 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago