ಪಂಜಾಬ್: ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) 8 ಲಕ್ಷ ರೂ.ಲಂಚ ಪ್ರಕರಣದಲ್ಲಿ ರೈಡ್ ಮಾಡಿ ಬಂಧಿಸಲಾಗಿತ್ತು. ಬಳಿಕ ಮನೆ ಪರಿಶೀಲನೆ ಮಾಡಿದಾಗ ತನಿಖಾಧಿಕಾಗಳು ಬೆಚ್ಚಿ ಬಿದಿದ್ದಾರೆ.
ಪರಿಶೀಲನೆ ವೇಳೆ ಬರೋಬ್ಬರಿ 5 ಕೋಟಿ ರೂ. ನಗದು, ಆಡಿ & ಮರ್ಸಿಡಿಸ್ ಕಾರು, 22 ಐಷಾರಾಮಿ ವಾಚ್ಗಳು, 1.5 ಕೆ.ಜಿ ಚಿನ್ನದ ಆಭರಣಗಳು ಸೇರಿ ಆಸ್ತಿ ದಾಖಲೆಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದೀಗ ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ.
ಭುಲ್ಲರ್, ಪಂಜಾಬ್ನ ರೋಪರ್ ಶ್ರೇಣಿಯಲ್ಲಿ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದಾರೆ.
ಪಂಜಾಬ್ನ ಫತೇಘರ್ ಸಾಹಿಬ್ನಲ್ಲಿರುವ ಆಕಾಶ್ ಬಟ್ಟಾ ಎಂಬ ಸ್ಕ್ಯಾಪ್ ವ್ಯಾಪಾರಿ ಐದು ದಿನಗಳ ಹಿಂದೆ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಗುರುವಾರ ಸಿಬಿಐ ಈ ಪ್ರಕರಣವನ್ನು ದಾಖಲಿಸಿದೆ. ದೂರುದಾರರ ಪ್ರಕಾರ, ಡಿಐಜಿ ಅವರು ಆರಂಭಿಕ ಲಂಚವಾಗಿ 8 ಲಕ್ಷ ರೂ.ಗಳನ್ನು ಪಾವತಿಸದಿದ್ದರೆ ಮತ್ತು ನಂತರ ಮಾಸಿಕ ಪಾವತಿಗಳನ್ನು ಮಾಡದಿದ್ದರೆ ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಟ್ಟಾ ಆರೋಪಿಸಿದ್ದಾರೆ.
ಬಂಧಿತ ಭುಲ್ಲರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದಾಗ ತನಿಖಾ ಸಂಸ್ಥೆ ಸುಮಾರು 5 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ಇದಲ್ಲದೆ, ಅಧಿಕಾರಿಗಳು ಪಂಜಾಬ್ನಲ್ಲಿ ಸುಮಾರು 1.5 ಕೆಜಿ ಆಭರಣಗಳು, ಆಸ್ತಿ ದಾಖಲೆಗಳು ಮತ್ತು ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಎರಡು ಐಷಾರಾಮಿ ವಾಹನಗಳ (ಮರ್ಸಿಡಿಸ್ ಮತ್ತು ಆಡಿ) ಕೀಲಿಗಳು, 22 ಐಷಾರಾಮಿ ಕೈಗಡಿಯಾರಗಳು, ಲಾಕರ್ ಕೀಗಳು, 40 ಲೀಟರ್ ಆಮದು ಮಾಡಿಕೊಂಡ ಮದ್ಯ ಮತ್ತು ಒಂದು ಡಬಲ್ ಬ್ಯಾರೆಲ್ ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು ಒಂದು ಏರ್ಗನ್ ಸೇರಿದಂತೆ ಬಂದೂಕುಗಳು ಸೇರಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…