ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: ಕೋಟ್ಯಂತರ ನಗದು, ನಗ, ಐಷಾರಾಮಿ ವಾಚ್‌, ಕಾರು, ಮದ್ಯ ಸೇರಿದಂತೆ ಇತರೆ ವಸ್ತು ವಶ

ಪಂಜಾಬ್: ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) 8 ಲಕ್ಷ ರೂ.ಲಂಚ ಪ್ರಕರಣದಲ್ಲಿ ರೈಡ್ ಮಾಡಿ ಬಂಧಿಸಲಾಗಿತ್ತು. ಬಳಿಕ ಮನೆ ಪರಿಶೀಲನೆ ಮಾಡಿದಾಗ ತನಿಖಾಧಿಕಾಗಳು ಬೆಚ್ಚಿ ಬಿದಿದ್ದಾರೆ.

ಪರಿಶೀಲನೆ ವೇಳೆ ಬರೋಬ್ಬರಿ 5 ಕೋಟಿ ರೂ. ನಗದು, ಆಡಿ & ಮರ್ಸಿಡಿಸ್ ಕಾರು, 22 ಐಷಾರಾಮಿ ವಾಚ್‌ಗಳು, 1.5 ಕೆ.ಜಿ ಚಿನ್ನದ ಆಭರಣಗಳು ಸೇರಿ ಆಸ್ತಿ ದಾಖಲೆಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದೀಗ ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ.

ಭುಲ್ಲರ್, ಪಂಜಾಬ್‌ನ ರೋಪರ್ ಶ್ರೇಣಿಯಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟ‌ರ್ ಜನರಲ್‌ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಯಾಗಿದ್ದಾರೆ.

ಪಂಜಾಬ್‌ನ ಫತೇಘರ್ ಸಾಹಿಬ್‌ನಲ್ಲಿರುವ ಆಕಾಶ್ ಬಟ್ಟಾ ಎಂಬ ಸ್ಕ್ಯಾಪ್ ವ್ಯಾಪಾರಿ ಐದು ದಿನಗಳ ಹಿಂದೆ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಗುರುವಾರ ಸಿಬಿಐ ಈ ಪ್ರಕರಣವನ್ನು ದಾಖಲಿಸಿದೆ. ದೂರುದಾರರ ಪ್ರಕಾರ, ಡಿಐಜಿ ಅವರು ಆರಂಭಿಕ ಲಂಚವಾಗಿ 8 ಲಕ್ಷ ರೂ.ಗಳನ್ನು ಪಾವತಿಸದಿದ್ದರೆ ಮತ್ತು ನಂತರ ಮಾಸಿಕ ಪಾವತಿಗಳನ್ನು ಮಾಡದಿದ್ದರೆ ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಟ್ಟಾ ಆರೋಪಿಸಿದ್ದಾರೆ.

ಬಂಧಿತ ಭುಲ್ಲರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದಾಗ ತನಿಖಾ ಸಂಸ್ಥೆ ಸುಮಾರು 5 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ಇದಲ್ಲದೆ, ಅಧಿಕಾರಿಗಳು ಪಂಜಾಬ್‌ನಲ್ಲಿ ಸುಮಾರು 1.5 ಕೆಜಿ ಆಭರಣಗಳು, ಆಸ್ತಿ ದಾಖಲೆಗಳು ಮತ್ತು ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಎರಡು ಐಷಾರಾಮಿ ವಾಹನಗಳ (ಮರ್ಸಿಡಿಸ್ ಮತ್ತು ಆಡಿ) ಕೀಲಿಗಳು, 22 ಐಷಾರಾಮಿ ಕೈಗಡಿಯಾರಗಳು, ಲಾಕರ್ ಕೀಗಳು, 40 ಲೀಟರ್ ಆಮದು ಮಾಡಿಕೊಂಡ ಮದ್ಯ ಮತ್ತು ಒಂದು ಡಬಲ್ ಬ್ಯಾರೆಲ್ ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವ‌ರ್ ಮತ್ತು ಒಂದು ಏರ್‌ಗನ್ ಸೇರಿದಂತೆ ಬಂದೂಕುಗಳು ಸೇರಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

13 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

14 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago