ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…