ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…