ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…