ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…