ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…