ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…