ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…