ಪಂಪ್ ಸೆಟ್ ಗಳಿಗೆ ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ  ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.

ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.

ಹಗಲಿನಲ್ಲಿ  5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್  ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್  ಕರೆಂಟ್ ಅನ್ನು  ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ  ಬೆಸ್ಕಾಂ ಜೆ‌.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago