ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…