ಪಕ್ಷಬೇಧ ಮರೆತು ಅಪ್ಪಯ್ಯಣ್ಣನವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ- ಜೆಡಿಎಸ್ ರಾ.ಪ್ರ.ಕಾ ಹರೀಶ್ ಗೌಡ

ಅಪ್ಪಯ್ಯಣ್ಣನವರ ಅಗಲಿಕೆ ನಮಗೆಲ್ಲಾ ನೋವನ್ನುಂಟು ಮಾಡಿದೆ. ಅಪ್ಪಯ್ಯಣ್ಣನವರು ನಮ್ಮ ಜೊತೆಯಲ್ಲೇ ಇರುತ್ತಾರೆ ಎಂಬ ಭಾವನೆ ಇದೆ. ಇಂದು ಪಕ್ಷಬೇಧ ಮರೆತು ಅಪ್ಪಯ್ಯಣ್ಣನವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.

ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು

ತೂಬಗೆರೆ ಹೋಬಳಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಮಾತ್ರ ಬೇರೆ ಇದೆ ಅಷ್ಟೇ, ಇನ್ನುಳಿದ ಸ್ಥಳೀಯ ಸಂಸ್ಥೆ ಚುನಾವಣೆಗಳಾದ ತಾಲೂಕು, ಜಿಲ್ಲಾ, ಗ್ರಾಮ ಪಂಚಾಯಿತಿ ಚುನಾವಣೆಗಳು, ಸೊಸೈಟಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆಗಳಿಗೆ ಅಪ್ಪಯ್ಯಣ್ಣನವರ ನೇತೃತ್ವ ಬಹಳ ಅವಶ್ಯಕತೆ ಇತ್ತು. ಅಪ್ಪಯ್ಯಣ್ಣನವರ ಕುಟುಂಬವು ಸಮಾಜ ಸೇವೆಯಲ್ಲಿ, ಜೆಡಿಎಸ್ ಪಕ್ಷಕ್ಕೆ ಸಹಕಾರ ಕೊಡುತ್ತೇವೆ ಎಂದು ತಿಳಿಸಿದೆ ಎಂದರು.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಅಪ್ಪಯ್ಯಣ್ಣನವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸದಾ ಅವರನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು…

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 hour ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

14 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

14 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

14 hours ago