ಪಕ್ಷಿಗಳಿಗೆ ನೂಲುಗಳ ಉರುಳು: ದೊಡ್ಡಬಳ್ಳಾಪುರದ ವಿವಿಧ ಕಡೆಗಳಲ್ಲಿ ಗಾಳಿಪಟದ ದಾರ, ಕಸದಲ್ಲಿ ನೂಲುಗಳಿಂದ ಪಕ್ಷಿಗಳ ಸಾವು: ನಗರ ಭಾಗದಲ್ಲಿ ಹೆಚ್ಚಿನ ಪಕ್ಷಿಗಳಿಗೆ ಸಮಸ್ಯೆ

ದೊಡ್ಡಬಳ್ಳಾಪುರದಲ್ಲಿ ಗಾಳಿಪಟದ ದಾರ, ವ್ಯರ್ಥವಾಗಿ ಎಸೆಯಲಾಗುವ ನೂಲುಗಳು ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ. ಸಾಕಷ್ಟು ಪಕ್ಷಿಗಳು ಇದರಿಂದ ಸಮಸ್ಯೆಗೆ ಸಿಲುಕುತ್ತಿದೆ.

ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆಗಳು ಬೆಳೆದಂತೆ ಮರಗಳ ಸಂಖ್ಯೆ, ಕೃಷಿವಲಯದ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಪಕ್ಷಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿದೆ. ಅದರಲ್ಲೂ ನಗರಭಾಗದಲ್ಲಿ ಪಕ್ಷಿಗಳ ಪ್ರಮಾಣದಲ್ಲಿ ಸಾಕಷ್ಟು ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷಿಗಳ ಸಂತತಿ ಉಳಿವಿಗೆ ಎಲ್ಲರೂ ಪ್ರಯತ್ನಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅನುಪಯುಕ್ತವಾದ ನೂಲುಗಳನ್ನು ಕೆರೆಯಂಗಳದಲ್ಲಿ , ಹರಿದ ಬಲೆಗಳನ್ನು ಕೆರೆಗಳ ಬಳಿ ಹಾಕುವುದರಿಂದ ಹಾಗೂ ಗಾಳಿಪಟ ಹಾರಿಸುವುದ ಪರಿಣಾಮವಾಗಿ ಪಕ್ಷಿಗಳಿಗೆ ಸಮಸ್ಯೆಯಾಗುತ್ತಿದೆ. ಇಂತಹ ನೂಲುಗಳು ಪಕ್ಷಿಗಳ ಕಾಲು, ರೆಕ್ಕೆ, ಕೊಕ್ಕಿಗೆ ಸಿಲುಕಿ ಸಮಸ್ಯೆಗೆ ಗುರಿಯಾಗಿರುವ ಕೆಲವೆಡೆ ಸಾವನಪ್ಪಿರುವ ಘಟನೆಗಳು ನಡೆದಿದೆ. ಇದರ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಂಡು ಪಕ್ಷಿಗಳ ಸಂತತಿಯ ಉಳಿವಿಗಾಗಿ ಎಲ್ಲರೂ ಕೆಲಸ ಮಾಡಬೇಕಿದೆ.

ನೂಲುಗಳ ಸಂಕಷ್ಟ
ಗಾಳಿಪಟದ ದಾರಗಳು ಸಿಲುಕಿ ಮನುಷ್ಯರಿಗೆ ಸಮಸ್ಯೆಯಾದ ಸಾಕಷ್ಟು ಉದಾಹರಣೆ ಇವೆ. ಇದೇ ರೀತಿಯಲ್ಲಿ ಗಾಳಿಪಟ ದಾರಕ್ಕೆ ಸಿಲುಕಿ ಪಕ್ಷಿಗಳ ಕತ್ತು , ರೆಕ್ಕೆಗಳು ಕತ್ತರಿಸಿ ಹೋಗಿ ಅವುಗಳ ಸಾವನಪ್ಪಿರುವ ಅನೇಕ ಘಟನೆಗಳಿವೆ. ಇನ್ನೂ ಮೀನಿನ ಬಲೆಯ ಚೂರುಗಳು, ಸೀರೆಗಳ ಅನುಪಯುಕ್ತ ನೂಲುಗಳು ಈ ಪಕ್ಷಿಗಳ ಕಾಲು, ಕೊಕ್ಕು, ರೆಕ್ಕೆಗೆ ಸಿಲುಕಿ ಅವುಗಳು ಹಾರಲಾರದೆ, ಆಹಾರ ಸೇವಿಸಲಾಗದೆ ಪರದಾಡುವ ಪರಿಸ್ಥಿತಿಯಿದೆ. ಕೆಲವು ದಿನಗಳವರೆಗೆ ಇದು ತೆಗೆಯಲಾಗದಿದ್ದಾಗ ಅವುಗಳು ಸಾವನಪ್ಪಿರುವ ಉದಾಹರಣೆಗಳನ್ನು ಕೂಡ ಕಾಣಬಹುದಾಗಿದೆ.

ಏನಾಗಬೇಕು?
* ಗಾಳಿಪಟ ಹಾರಿಸುವ ಅಪಾಯದ ಬಗ್ಗೆ ಅರಿವು
* ಪಕ್ಷಿಗಳ ಮಹತ್ವದ ಬಗ್ಗೆ ಜಾಗೃತಿ
* ನೂಲುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು.
* ಹರಿದ ಬಲೆಗಳನ್ನು ಕೆರೆಯಂತಹ ಜಲಮೂಲಗಳಿಗೆ ಹಾಕುವುದಕ್ಕೆ ಕಡಿವಾಣ ಹಾಕಬೇಕು.

ದೊಡ್ಡಬಳ್ಳಾಪುರ ನಗರದಲ್ಲಿ ಸಾಕಷ್ಟು ಪಕ್ಷಿಗಳು ಗಾಳಿಪಟದ ದಾರ, ನೂಲಿನಿಂದ ಸಾವನಪ್ಪುತ್ತಿವೆ. ಇದರಿಂದ ಸಾಕಷ್ಟು ಪಕ್ಷಿಗಳು ಮರೆಯಾಗುತ್ತಿದ್ದು, ಅವುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ- ಚಿದಾನಂದಮೂರ್ತಿ ಆಧ್ಯಕ್ಷ, ಯುವಸಂಚಲನ ಸಂಘಟನೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

7 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

11 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

11 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

19 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago