ಪಕ್ಷ ಸಂಘಟನೆ ಹಾಗೂ ಸಾಮಾಜಿಕ ಸೇವೆಯೇ ಹರೀಶ್ ಗೌಡರ ಕೊಡುಗೆ: ಹರೀಶ್ ಗೌಡರ ಕೊಡುಗೆ ಪ್ರಶ್ನಿಸಿದವರಿಗೆ ತಿರುಗೇಟು ಕೊಟ್ಟ ಮುಖಂಡರು

ಇತ್ತೀಚೆಗೆ ಬಿಜೆಪಿ ಹಾಗೂ ಜೆಡಿಎಸ್ ನ ಕೆಲ ಮುಖಂಡರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಹರೀಶ್ ಗೌಡರ ಸ್ಥಾನ ಮತ್ತು ತಾಲೂಕಿಗೆ ನೀಡಿದ ಕೊಡುಗೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಗ್ರಾಮಕ್ಕೆ ಹರೀಶ್ ಗೌಡರನ್ನು ಮೊದಲು ಕರೆತಂದಿದ್ದು ಪ್ರಶ್ನೆ ಮಾಡಿದ್ದ ವಸಂತ್ ರವರು. ಆದರೆ, ಈಗ ಅವರೇ ಹರೀಶ್ ಗೌಡರ ಕೊಡುಗೆ ಏನು ಎಂದು ಪ್ರಶ್ನೆ ಮಾಡುವುದು ಹಾಸ್ಯಸ್ಪದವಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಅವರು ಗ್ರಾಮದ ದೇವಸ್ಥಾನಗಳ ಅಭಿವೃದ್ಧಿ, ಗ್ರಾಮಸ್ಥರ ಆರೋಗ್ಯ ಸಮಸ್ಯೆಗಳಾದಲ್ಲಿ ಹಲವರು ಬಾರಿ ಧನ ಸಹಾಯವನ್ನು ಮಾಡಿದ್ದಾರೆ ಎಂದು ದೊಡ್ಡತುಮಕೂರು ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಪ್ರಭಾಕರ್ ಹೇಳಿದರು

ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ಹರೀಶ್ ಗೌಡರು ಅಧಿಕಾರ ಸ್ವೀಕರಿಸಿ ತಾಲ್ಲೂಕಿನಲ್ಲಿ ಜೆಡಿಎಸ್ ಬಲವರ್ಧನೆ ಹಾಗೂ ಪಕ್ಷ ಸಂಘಟನೆಗೆ ಹಗಲಿರುಳು ಶ್ರಮಿಸುತ್ತಿರುವುದು ನಮಗೆಲ್ಲ ತಿಳಿದಿದೆ ಎಂದು ಪ್ರಶ್ನೆ ಮಾಡಿದವರಿಗೆ ತಿರುಗೇಟು ಕೊಟ್ಟರು.

ಜೆಡಿಎಸ್ ನಲ್ಲಿ ಇಬ್ಬಾಗವಾಗಿದೆ ಎಂದು ಬಿಜೆಪಿ ಮುಖಂಡ ಮಂಜುನಾಥ್ ಮಾತುಗಳಿಗೆ ಉತ್ತರಿಸುತ್ತಾ… ಜೆಡಿಎಸ್ ಇಬ್ಬಾಗವಾಗಿಲ್ಲ… ಜೆಡಿಎಸ್ ಕಾರ್ಯಕರ್ತರು ಸದಾ ಒಮ್ಮತದ ನಿರ್ಧಾರದಿಂದ ಜೊತೆಯಲ್ಲಿದ್ದೇವೆ ಎಂದರು. ಹರೀಶ್ ಗೌಡರ ಮುಖಕ್ಕೆ ಮಸಿ ಬಳಿಯುತ್ತವೆ ಎಂಬ ಹೇಳಿಕೆ ಸಲ್ಲದು. ಹರೀಶ್ ಗೌಡರ ಮುಖಕ್ಕೆ ಮಸಿ ಬಳಿಯುತ್ತೇವೆ ಎನ್ನುವ ಮನಸ್ಥಿತಿ ಕುರಿತು ಶಾಸಕರು ತಮ್ಮ ಹಿಂಬಾಲಕರಿಗೆ ಬುದ್ದಿ ಹೇಳಬೇಕಿದೆ. ಈ ಕುರಿತು ಹೇಳಿಕೆ ನೀಡಿದವರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗುತ್ತೆವೆ. ಶಾಸಕರು ತಮ್ಮ ಹಿಂಬಾಲಕರಿಗೆ ಈ ಮನಸ್ಥಿತಿಯನ್ನು ಕೈಬಿಡುವಂತೆ ಬುದ್ದಿ ಹೇಳಬೇಕಿದೆ ಎಂದು ಆಗ್ರಹಿಸಿದರು.

ಕೆಪಿಸಿಸಿ ಎಸ್ ಸಿ ಘಟಕದ ರಾಜ್ಯ ಸಂಚಾಲಕ ಸಿ.ರಾಮಕೃಷ್ಣಪ್ಪ ಮಾತನಾಡಿ, ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರಿ ಸಂಘ (ವಿಎಸ್ಎಸ್ಎನ್) ಮೂರು ಲಕ್ಷ ನಷ್ಟದಲ್ಲಿದೆ. ಇದರ ನಡುವೆ ರಾಜಕೀಯ ಕಿತ್ತಾಟದಿಂದ ಸಂಘ ಹಳ್ಳ ಹಿಡಿಯುತ್ತಿದೆ. ಸಹಕಾರಿ ಸಂಘ ಕನಿಷ್ಠ 10 ಸಾವಿರ ಲಾಭ ಗಳಿಸದಿದ್ದಲ್ಲಿ ಸಂಘವು ಸೂಪರ್ ಸೀಡ್ ಆಗುವ ಆತಂಕ ಸಹ ಇದೆ. ಮತ್ತೆ ಸಂಘವನ್ನ ಕಟ್ಟುವುದು ಅಸಾಧ್ಯವಾದ ಮಾತು. ರಾಜಕೀಯ ಕಿತ್ತಾಟ ಬಿಟ್ಟು ಗ್ರಾಮದ ಅಭಿವೃದ್ಧಿಗಾಗಿ ದುಡಿಯೋಣ ಎಂದು ಹೇಳಿದರು.

ಸಂಘ ಪ್ರಾರಂಭವಾದ ಸಮಯದಲ್ಲಿ ಸರ್ವ ಪಕ್ಷಗಳಿಗೆ ಸಮಪಾಲು ನೀಡಿ ಪ್ರಾರಂಭಿಸಿದೆವು, ಆದರೆ, ಈ ಒಪ್ಪಂದವನ್ನು ಬಿಜೆಪಿ ಪರಿಪಾಲನೆ ಮಾಡದ ಕಾರಣ ಚುನಾವಣೆಗೆ ಮುಂದಾಗಬೇಕಾಯಿತು. ಚುನಾವಣೆ ಫಲಿತಾಂಶ ವೇಳೆ ಗಲಾಟೆಯಾದಾಗ ಸ್ಥಳಕ್ಕೆ ಬಂದ ಶಾಸಕರು, ಷೇರುದಾರರ ಅಹವಾಲುಗಳನ್ನು ಅಲಿಸದೇ ಬಿಜೆಪಿ ಪಕ್ಷದ ಪರ ನಿಂತು ಪ್ರತಿಭಟನೆಗೆ ಮುಂದಾಗುತ್ತಾರೆ. ಶಾಸಕರು ಕೇವಲ ಒಂದು ಪಕ್ಷದ ಶಾಸಕರಲ್ಲ, ತಾಲ್ಲೂಕಿನ ಪ್ರಥಮ ಪ್ರಜೆ, ಸರ್ವರಿಗೂ ಹಿತ ಕಾಯುವ ಕಾರ್ಯ ಕೆಲಸ ಮಾಡುವುದನ್ನ ಅವರು ಅರಿಯಬೇಕಿದೆ ಎಂದರು.

ಜೆಡಿಎಸ್ ಮುಖಂಡ ದೀಪು ಮಾತನಾಡಿ, ಇದು ನಮ್ಮ ದೊಡ್ಡತುಮಕೂರಿನ ಮೊದಲ ಚುನಾವಣೆ. ಈ ಚುನಾವಣೆಯಲ್ಲಿ ಸತತವಾಗಿ ಮೈತ್ರಿಗೆ ಪ್ರಯತ್ನ ಮಾಡಿದ್ದೇವು. ಆದರೆ, ಬಿಜೆಪಿ ಒಪ್ಪದ ಕಾರಣ ಈ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆಗೆ ವೆಚ್ಚ ಮಾಡಿದ ಹಣವನ್ನು ಗ್ರಾಮದ ಅಭಿವೃದ್ಧಿಗೆ ಬಳಸಿದ್ದರೆ ಅದೆಷ್ಟೋ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಿತ್ತು. ಚುನಾವಣೆ ನಡೆಸಲು ಇದ್ದ ಬದ್ಧತೆ ಗ್ರಾಮದ ಅಭಿವೃದ್ಧಿಗೆ ಬಳಸಿ ಎಂದರು.

ಸುದ್ದಿಗೊಷ್ಟಿಯಲ್ಲಿ ಮುಖಂಡರಾದ ಚೈತ್ರ ಭಾಸ್ಕರ್, ವಿರೇಗೌಡ, ಅಜಯ್, ಮಂಜುನಾಥ್, ಚೈತ್ರ ಶ್ರೀಧರ್, ಪ್ರವೀಣ್ ಶಾಂತಿನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 hour ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

5 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

7 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

9 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago