ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

9 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

9 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago