ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

14 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

21 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

24 hours ago