ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

2 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

4 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

5 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

10 hours ago