ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

4 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

5 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

11 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

14 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

1 day ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

1 day ago