ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago