ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago