ಪಟಾಕಿ ಸಿಡಿಸಲು ಸರಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮಿಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಇದರ ಅನ್ವಯ ಮಾತ್ರ ಹಸಿರು ಪಟಾಕಿ ಸಿಡಿಸಲು ಸರಕಾರ ಅವಕಾಶ ಕಲ್ಪಿಸಿದೆ. ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು ಮತ್ತು ಹಿರಿಯ ನಾಗರಿಕರ, ಪುಟ್ಟ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪಾಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿ ಪ್ರಾಣಿ ಸಂಕುಲಗಳಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ದೀಪದಿಂದ ದೀಪ ಹಚ್ಚಿ ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…