ಪಟಾಕಿ ಸಿಡಿಸುವ ವೇಳೆ ಕಿಡಿಗೇಡಿಗಳ ಹುಚ್ಚಾಟ: ಅಮಯಾಕ ನಿರುದ್ಯೋಗಿ ಯುವಕ ಬಲಿ: ಪಟಾಕಿ ಸಿಡಿಸುವ ಪೆಟ್ಟಿಗೆ ಮೇಲೆ ಕೂರಿಸಿ ಬೆಂಕಿ ಹಚ್ಚಿದ ಪಾಪಿಗಳು: ಬದುಕುಳಿದರೆ ಆಟೋರಿಕ್ಷಾ ಕೊಡಿಸುವುದಾಗಿ ಆಮಿಷ

ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ಕಂಡುಬಂದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ,‌ ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಅಕ್ಟೋಬರ್ 31ರಂದು ರಾತ್ರಿ ಪಾನಮತ್ತರಾಗಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಶಬರೀಶನಿಗೆ ಸವಾಲೆಸೆದಿದ್ದರು. ಮದ್ಯದ ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.

ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿ ಅಲ್ಲಿಂದ ದೂರ ಓಡಿದ್ದಾರೆ. ಬಳಿಕ ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮಾಹಿತಿ ನೀಡಿದ್ದಾರೆ.

ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Ramesh Babu

Journalist

Recent Posts

ಅಕ್ರಮ ವಲಸೆ ತಪ್ಪು…. ದಯವಿಟ್ಟು ಸಕ್ರಮ ಬದುಕು ನಮ್ಮದಾಗಲಿ…..

ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…

25 minutes ago

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

12 hours ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

13 hours ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

16 hours ago

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…

16 hours ago

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು…

17 hours ago