ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ಕಂಡುಬಂದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಕ್ಟೋಬರ್ 31ರಂದು ರಾತ್ರಿ ಪಾನಮತ್ತರಾಗಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಶಬರೀಶನಿಗೆ ಸವಾಲೆಸೆದಿದ್ದರು. ಮದ್ಯದ ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.
ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿ ಅಲ್ಲಿಂದ ದೂರ ಓಡಿದ್ದಾರೆ. ಬಳಿಕ ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮಾಹಿತಿ ನೀಡಿದ್ದಾರೆ.
ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…