ಪಟಾಕಿ ಸಿಡಿಸುವ ವೇಳೆ ಕಿಡಿಗೇಡಿಗಳ ಹುಚ್ಚಾಟ: ಅಮಯಾಕ ನಿರುದ್ಯೋಗಿ ಯುವಕ ಬಲಿ: ಪಟಾಕಿ ಸಿಡಿಸುವ ಪೆಟ್ಟಿಗೆ ಮೇಲೆ ಕೂರಿಸಿ ಬೆಂಕಿ ಹಚ್ಚಿದ ಪಾಪಿಗಳು: ಬದುಕುಳಿದರೆ ಆಟೋರಿಕ್ಷಾ ಕೊಡಿಸುವುದಾಗಿ ಆಮಿಷ

ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ಕಂಡುಬಂದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ,‌ ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಅಕ್ಟೋಬರ್ 31ರಂದು ರಾತ್ರಿ ಪಾನಮತ್ತರಾಗಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಶಬರೀಶನಿಗೆ ಸವಾಲೆಸೆದಿದ್ದರು. ಮದ್ಯದ ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.

ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿ ಅಲ್ಲಿಂದ ದೂರ ಓಡಿದ್ದಾರೆ. ಬಳಿಕ ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮಾಹಿತಿ ನೀಡಿದ್ದಾರೆ.

ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

15 minutes ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

20 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago